ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನೇಮಕಾತಿ 2023

ಕೇಂದ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ (UDID) ನೀಡುವ ಯೋಜನೆಯನ್ನು ಅನುಷ್ಟಾನ ಗೊಳಿಸುತ್ತಿದ್ದು, ಈ ಯೋಜನೆಯ ಉಸ್ತುವಾರಿಗೆ ರಾಜ್ಯ ಸಂಯೋಜಕರ ಹುದ್ದೆಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ.

ಸಂಸ್ಥೆ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

ಪ್ರಮುಖ ವಿವರಗಳು :

ವಿಧ :ಸರ್ಕಾರಿ ಉದ್ಯೋಗಗಳು
ಹುದ್ದೆಯ ಹೆಸರು :ರಾಜ್ಯ ಸಂಯೋಜಕರು
ಒಟ್ಟು ಖಾಲಿ ಹುದ್ದೆಗಳು :01
ಸ್ಥಳ :ಬೆಂಗಳೂರು
ಅರ್ಜಿ ಸಲ್ಲಿಸುವ ವಿಧಾನ :ಆಫ್ಲೈನ್

ಖಾಲಿ ಹುದ್ದೆಗಳ ವಿವರಗಳು :

  • ಎಸ್.ಡಿ.ಎ
  • ಎಫ್.ಡಿ.ಎ

ಶೈಕ್ಷಣಿಕ ಅರ್ಹತೆ :

  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕಂಪ್ಯೂಟರ್ ಸೈನ್ಸ್/ ಐಟಿ ಯಲ್ಲಿ ಡಿಪ್ಲೊಮಾ ಅರ್ಹತೆ ಹೊಂದಿರಬೇಕು ಅಥವಾ ಕಂಪ್ಯೂಟರ್ ಎಜ್ಯುಕೇಶನ್ ನಲ್ಲಿ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿ :

  • ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.

ವೇತನ ಶ್ರೇಣಿಯ ವಿವರಗಳು :

  • ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 (ಎಲ್ಲಾ ಭತ್ಯೆಗಳು ಸೇರಿದಂತೆ) ಸಂಭಾವನೆ ನೀಡಲಾಗುತ್ತದೆ.

ಅರ್ಜಿ ಶುಲ್ಕ :

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

    ಅರ್ಜಿ ಸಲ್ಲಿಸುವುದು ಹೇಗೆ :

    ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

    • ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ತಮ್ಮ ಬಯೋಡೇಟಾ ವನ್ನು ಸಿದ್ಧಪಡಿಸಿಕೊಳ್ಳಬೇಕು.
    • ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಹುದ್ದೆಗೆ ಅಗತ್ಯವಿರುವ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು. (ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು)

    ಅರ್ಜಿ ಸಲ್ಲಿಸುವ ವಿಳಾಸ :

    • ನಿರ್ದೇಶಕರ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ, ಪೋಡಿಯಂ ಬ್ಲಾಕ್, ವಿ.ವಿ.ಗೋಪುರ, ಡಾ|| ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001

    ಪ್ರಮುಖ ದಿನಾಂಕಗಳು :

    ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :11-07-2023
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :24-07-2023

    Leave a Reply